
ಮತ್ತೊಮ್ಮೆ ಈ ವಿಷಯ ಪ್ರಸ್ತಾಪ ಮಾಡುತ್ತಿದ್ದೇನೆ ಅಂದುಕೊಳ್ಳಬೇಡಿ.
ನಮ್ಮ ಕರಾವಳಿ (ನಿಮ್ಮೂರಿನ ಅವಸ್ಥೆಯೂ ಹೀಗೆ ಇರಬಹುದು) ರಸ್ತೆಗಳ ಖಾಯಂ ಕತೆ ಇದು.
ಅದರಲ್ಲೂ ರಾಷ್ಟ್ರೀಯ ಹೆದ್ದಾರಿ ಎಂದರೆ ಕೇಳುವುದೇ ಬೇಡ.
ಸೆಕೆಂಡ್ ಸೆಕೆಂಡ್ ಲೆಕ್ಕ ಹಾಕುವ ಬಸ್ಸು, ಲಾರಿಗಳು ತಮಗೆ ಜಾಗ ಕೊಡದ ಇತರ ವಾಹನಗಳನ್ನು ಕ್ಷುಲ್ಲಕ ಪೀಡೆಗಳಂತೆ ಕೆಕ್ಕರಿಸಿ ದಾಟುತ್ತವೆ.
ಅದರ ಜೊತೆ ಅಲ್ಲಲ್ಲಿ ರಸ್ತೆ ಅಗೆಯುವ ಕಾಮಗಾರಿ.
ಹೀಗೆ ಹೈರಾಣಾಗಿರುವ ರಸ್ತೆಗಳು ಪ್ರತೀ ಮಳೆಗಾಲ ಜನರ ತಾಳ್ಮೆಯನ್ನು ಕೆಣಕುತ್ತವೆ.
ದ.ಕ.ಜಿಲ್ಲೆಗೆ ದಿನಕ್ಕೆ ಸಾವಿರಾರು ಯಮಸ್ವರೂಪಿ ಅದಿರು ಲಾರಿಗಳು ಪ್ರವೇಶಿಸುತ್ತವೆ. ಸಣ್ನ ಪುಟ್ಟ ಅಪಘಾತಗಳಿಗಂತೂ ಲೆಕ್ಕ ಬರೆಯುವವರೇ ಇಲ್ಲ ಎನ್ನುವಂತಾಗಿದೆ. ಕಳೆದ ವಾರ ದ.ಕ-ಉಡುಪಿ ಜಿಲ್ಲೆಯಲ್ಲಿ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಎರಡಂಕಿ ತಲುಪಿದೆ.
ಹೀಗೇಕೆ?
********
ವಾಹನದಟ್ಟಣೆ ಹೆಚ್ಹಾಗಿದೆಯೋ?
ನಿಯಮ ಪಾಲನೆ ಆಗುತ್ತಿಲ್ಲವೋ?
ಇದು
ಉತ್ತರ ಇಲ್ಲದ ಪ್ರಶ್ನೆಯೇ
ಅಥವಾ ಸಿಲ್ಲಿ ವಿಷಯವೇ
(ಚಿತ್ರದಲ್ಲಿ ಕಾಣುವುದು ಐದಾರು ತಿಂಗಳ ಹಿಂದೆ ನಾನು ಪ್ರಯಾಣಿಸುತ್ತಿದ್ದ ಕಾರಿನ ಮೇಲೆ ಇದ್ದಕ್ಕಿದ್ದಂತೆ ಮಣ್ಣು ಅಗೆಯುವ ಯಂತ್ರವೊಂದು ಮೇಲೇರಿ ಅಪಘಾತಕ್ಕೀಡಾಗಿದ್ದು)